ಜೆಪಿ ನಡ್ಡಾ, ಅಶ್ವಿನಿ ವೈಷ್ಣವ್, ಸೋನಿಯಾ ಗಾಂಧಿ ಸಹಿತ 41 ಮಂದಿ ರಾಜ್ಯಸಭೆಗೆ ಅವಿರೋಧ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆಗೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್, ಇತ್ತೀಚೆಗೆ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ ಅಶೋಕ್​ ಚವಾಣ್​ ಸೇರಿದಂತೆ 41 ಜನರು ವಿವಿಧ ರಾಜ್ಯಗಳಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕಡೆಯ ದಿನವಾಗಿದ್ದು, ಚುನಾವಣೆ ಘೋಷಣೆಯಾಗಿದ್ದ 56 ಸ್ಥಾನಗಳ ಪೈಕಿ 41 ರಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು.

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರು, ರಾಜಸ್ಥಾನದಿಂದ ರಾಜ್ಯಸಭೆಗೆ ಇದೇ ಮೊದಲ ಬಾರಿಗೆ ಪ್ರವೇಶಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗುಜರಾತ್​ನಿಂದ, ಕೇಂದ್ರ ಸಚಿವ ಅಶ್ವಿನಿ ವೈಷ್ಟವ್​ ಒಡಿಶಾದಿಂದ, ಎಲ್​ ಮುರುಗನ್​ ಮಧ್ಯಪ್ರದೇಶದಿಂದ, ಅಶೋಕ್​ ಚವಾಣ್​ ಮಹಾರಾಷ್ಟ್ರದಿಂದ, ಅಜಿತ್​ ಪವಾರ್​ ಬಣದ ಎನ್​ಸಿಪಿ ಸೇರಿರುವ ಮಿಲಿಂದ್​​ ದೇವ್ರಾ, ಪ್ರಪುಲ್​ ಪಟೇಲ್​ ಕೂಡ ಇದೇ ರಾಜ್ಯದಿಂದ ಆಯ್ಕೆಯಾಗಿದ್ದಾರೆ.

ಯಾವ ಪಕ್ಷಕ್ಕೆ ಎಷ್ಟು?: ಅವಿರೋಧ ಆಯ್ಕೆಯಲ್ಲಿ ಬಿಜೆಪಿ ಅತಿಹೆಚ್ಚು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. 20 ಸ್ಥಾನಗಳಲ್ಲಿ ಕಮಲ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ 6, ಟಿಎಂಸಿ 4, ವೈಎಸ್​ಆರ್​ಸಿಪಿ 3, ಬಿಜೆಡಿ, ಆರ್​​ಜೆಡಿ ತಲಾ 2, ಎನ್​ಸಿಪಿ, ಶಿವಸೇನೆ ಬಿಆರ್​ಎಸ್​, ಜೆಡಿಯು ತಲಾ 1 ಸ್ಥಾನದಲ್ಲಿ ಜಯ ಕಂಡಿವೆ.

ಉಳಿದ 15 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಅದರಲ್ಲಿ 15 ಸ್ಥಾನಗಳು ಉತ್ತರ ಪ್ರದೇಶದಿಂದ 10, ಕರ್ನಾಟಕದ 4 ಮತ್ತು ಹಿಮಾಚಲದ ಒಂದು ಸ್ಥಾನ ಒಳಗೊಂಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!