ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಪುವಿನ ಪಾಂಗಾಳ ಬಳಿ ಹಾಳಾಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಮೃತ ಕಾರು ಚಾಲಕ ನಾಗೇಶ್ ಎಂದು ಗುರುತಿಸಲಾಗಿದೆ.
ಕಾಪುವಿನ ಮೆಸ್ಕಾಂ ಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಾಪು ಠಾಣಾ ಪೋಲಿಸರು, ಹೆದ್ದಾರಿ ಗಸ್ತು ಪಡೆ ಆಗಮಿಸಿದ್ದು, ಕಾರು ಹಾಗು ಲಾರಿಯನ್ನು ತೆರವುಗೊಳಿಸಿದ್ದಾರೆ.