ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಹೇಳಿದ್ದಾರೆ. ಇತ್ತೀಚೆಗೆ ಯುವರಾಜ್ ಸಿಂಗ್ ತಮ್ಮ ಕುಟುಂಬ ಸಮೇತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು. ಈ ಸಭೆಯ ಸ್ವಲ್ಪ ಸಮಯದ ನಂತರ, ಯುವರಾಜ್ ಸಿಂಗ್ ಬಿಜೆಪಿಗೆ ಸ್ಪರ್ಧಿಸುತ್ತಿದ್ದಾರೆ ಎಂದು ಘೋಷಿಸಲಾಗಿತ್ತು.
ಯುವರಾಜ್ ಸಿಂಗ್ ಪಂಜಾಬ್ನ ಗುರುದಾಸ್ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು, ಅದಕ್ಕಾಗಿ ಅವರು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದೀಗ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಯುವರಾಜ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ನಾನು ಗುರುದಾಸ್ಪುರ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಜನರನ್ನು ವಿವಿಧ ರೀತಿಯಲ್ಲಿ ಬೆಂಬಲಿಸಲು ಮತ್ತು ಸಹಾಯ ಮಾಡಲು ಬಯಸುತ್ತೇನೆ. ಅದನ್ನು YOUWECAN ಫೌಂಡೇಷನ್ ಮೂಲಕ ಮುಂದುವರಿಸುತ್ತೇನೆ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.