ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡ ಮತ್ತೆ ಪರಿಶೀಲನೆ ನಡೆಸಿದೆ.
ಪ್ರಕರಣವನ್ನು ರಾಜ್ಯ ಸರ್ಕಾರ ಎನ್ ಐಎ ತನಿಖೆಗೆ ವರ್ಗಾವಣೆ ಮಾಡಿದೆ. ಘಟನೆ ನಡೆದು ನಾಲ್ಕು ದಿನಗಳಾದರೂ ಶಂಕಿತನ ಪತ್ತೆಯಾಗಿಲ್ಲ. ಆರೋಪಿ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದೆ.ಈ ನಡುವೆ ಎಫ್ ಎಸ್ ಎಲ್ ತಂಡದ ಅಧಿಕಾರಿಗಳು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಮರುಪರಿಶೀಲನೆ ನಡೆಸಿದ್ದಾರೆ.