SHOCKING | ವಿದ್ಯುತ್ ಕಂಬಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿದ್ಯುತ್ ಕಂಬಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿಯಾಗಿದ್ದು,ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಹಾರವಳ್ಳಿ ಗ್ರಾಮದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಸಾವು-ನೋವು ಸಂಭವಿಸಿಲ್ಲ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರಿನಲ್ಲಿ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

ವಿ.ಎಸ್.ಪಾಟೀಲ್ ಅವರ ಎದೆಗೆ ಪೆಟ್ಟಾಗಿದೆ. ಕಾರು ಚಾಲಕ ಆನಂದ್ ಕಣ್ಣಿಗೆ ಗಾಯಗಳಾಗಿವೆ. ಇಬ್ಬರನ್ನು ಮುಂಡಗೋಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!