ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ಹರಿಯಾಣದಲ್ಲಿ ರಾಜಕೀಯ ಗೊಂದಲದ ನಡುವೆ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಅವರು ಇಂದು ಮಂಗಳವಾರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ವರದಿಗಳ ಪ್ರಕಾರ, ನಯಾಬ್ ಸಿಂಗ್ ಸೈನಿ ಅವರ ಸ್ಥಾನಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ಕರ್ನಾಲ್ನಿಂದ ಮನೋಹರ ಲಾಲ್ ಖಟ್ಟರ್ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.