ಹನಿ ನೀರಿಗೂ ಹಾಹಾಕಾರ: ನೀರಿನ ಪೂರೈಕೆಯಲ್ಲಿ ಶೇ 20ರಷ್ಟು ಕಡಿತಕ್ಕೆ ಜಲಮಂಡಳಿ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿಯಲ್ಲಿನ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು, ಬೆಂಗಳೂರು ನೀರು ಸರಬರಾಜು ಮಂಡಳಿ (BWSSB) ಪ್ರಬೃಹತ್‌ ಪ್ರಮಾಣದಲ್ಲಿ ನೀರನ್ನು ಬಳಸುವ ಕಂಪನಿಗಳು, ಆಸ್ಪತ್ರೆಗಳು, ರೈಲ್ವೆ, ವಿಮಾನ ನಿಲ್ದಾಣಗಳಿಗೆ 20% ರಷ್ಟು ನೀರು ಪೂರೈಕೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಬೃಹತ್ ಪ್ರಮಾಣದಲ್ಲಿ ನೀರನ್ನು ಪಡೆಯುವ 3 ಲಕ್ಷ ಸಂಸ್ಥೆಗಳಿದ್ದು ಏಪ್ರಿಲ್ 1 ರಿಂದ 20% ರಷ್ಟು ನೀರು ಪೂರೈಕೆಯನ್ನು ಸಂಪೂರ್ಣವಾಗಿ ಕಡಿತಗೊಳಿಸಲು BWSSB ಆದೇಶಿಸಿದೆ. ಮಂಡಳಿಯು ಬೆಂಗಳೂರಿನಲ್ಲಿ ದೊಡ್ಡ ನೀರು ಸರಬರಾಜು ಜಾಲಗಳನ್ನು ಹೊಂದಿರುವ ಗ್ರಾಹಕರೊಂದಿಗೆ ಸಭೆ ನಡೆಸಿ ಈ ನಿರ್ಧಾರಗಳನ್ನು ಕೈಗೊಂಡಿದೆ.

ಬೆಂಗಳೂರು ಪ್ರಸ್ತುತ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿದೆ. ಬೆಂಗಳೂರು 1.40 ಕೋಟಿ ಜನಸಂಖ್ಯೆಯನ್ನು ಹೊಂದಿದೆ, ಆದರೆ ನೀರು ಸರಬರಾಜು ಒಂದು ಸವಾಲಾಗಿದ್ದು ಬೆಂಗಳೂರಿನ ನಿವಾಸಿಗಳಿಗೆ ನೀರು ಒದಗಿಸಲು ಮಂಡಳಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ನೀರು ಸರಬರಾಜು ಮಂಡಳಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!