ಮಳವಳ್ಳಿ-ಮೈಸೂರು ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

ಹೊಸದಿಗಂತ ವರದಿ, ಮಳವಳ್ಳಿ:

ಮಳವಳ್ಳಿ-ಮೈಸೂರು ಮುಖ್ಯರಸ್ತೆಯ ತಾಲೂಕಿನ ನೇಣನೂರು ಗೇಟ್ ಬಳಿ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ನೇಣನೂರು ಗ್ರಾಮದ ಮಹದೇವಸ್ವಾಮಿ(60) ಮೃತಪಟ್ಟ ಪಾದಚಾರಿ. ಮಳವಳ್ಳಿ-ಮೈಸೂರು ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಪಾದಚಾರಿಯ ದೇಹ ತುಂಡು ತುಂಡಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕಿರುಗಾವಲು ಪೊಲೀಸ್ ಠಾಣೆಯ ಪಿಎಸ್‌ಐ ಡಿ.ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಕ್ಕಿ ಹೊಡೆದ ವಾಹನದ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!