ಹೊಸದಿಗಂತ ವರದಿ, ಮಳವಳ್ಳಿ:
ಮಳವಳ್ಳಿ-ಮೈಸೂರು ಮುಖ್ಯರಸ್ತೆಯ ತಾಲೂಕಿನ ನೇಣನೂರು ಗೇಟ್ ಬಳಿ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ನೇಣನೂರು ಗ್ರಾಮದ ಮಹದೇವಸ್ವಾಮಿ(60) ಮೃತಪಟ್ಟ ಪಾದಚಾರಿ. ಮಳವಳ್ಳಿ-ಮೈಸೂರು ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಪಾದಚಾರಿಯ ದೇಹ ತುಂಡು ತುಂಡಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಕಿರುಗಾವಲು ಪೊಲೀಸ್ ಠಾಣೆಯ ಪಿಎಸ್ಐ ಡಿ.ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಕ್ಕಿ ಹೊಡೆದ ವಾಹನದ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.