ಜ್ಞಾನವಾಪಿ ಮಸೀದಿಯ ನೆಲಮಾಳಿಗೆ ಪ್ರಕರಣ: ಏಪ್ರಿಲ್ 11ರಂದು ವಿಚಾರಣೆ ಎಂದ ವಾರಣಾಸಿ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ 11ರಂದು ಜ್ಞಾನವಾಪಿ ಮಸೀದಿಯ ನೆಲಮಾಳಿಗೆ ಪ್ರಕರಣದ ವಿಚಾರಣೆಯನ್ನು ನಡೆಸುವುದಾಗಿ ವಾರಣಾಸಿ ಕೋರ್ಟ್ ಮಂಗವಾರ ಹೇಳಿದೆ.

ಇತ್ತೀಚೆಗೆ ಹಿಂದು ಪ್ರಾರ್ಥನೆಗೆ ಅನುಮತಿ ನೀಡಿದ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯ ಮೇಲೆ ಮುಸ್ಲಿಂ ಭಕ್ತರು ನಡೆಯುವುದನ್ನು ತಡೆಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 11 ರಂದು ನಿಗದಿಪಡಿಸಿದೆ.

ಹಿಂದು ಪರ ವಕೀಲ ಮದನ್ ಮೋಹನ್ ಯಾದವ್ ಮಾಹಿತಿ ನೀಡಿದ್ದು, ಮುಸ್ಲಿಂ ಕಡೆಯವರು ರಂಜಾನ್ ತಿಂಗಳಾಗಿರುವುದರಿಂದ ಉಪವಾಸ ಮಾಡುತ್ತಿದ್ದೇವೆ ಎಂದು ಮಂಗಳವಾರ ಜಿಲ್ಲಾ ಉಸ್ತುವಾರಿ ನ್ಯಾಯಾಧೀಶ ಅನಿಲ್ ಕುಮಾರ್ ಅವರ ನ್ಯಾಯಾಲಯಕ್ಕೆ ತಿಳಿಸಿದರು. ಹೀಗಾಗಿ ಅವರ ಪರ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದರು.

ಈ ಕುರಿತು ನ್ಯಾಯಾಲಯವು ಏಪ್ರಿಲ್ 11 ರಂದು ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ ಎಂದು ಅವರು ಹೇಳಿದರು.

ಸೆಲ್ಲಾರ್‌ನ ಮೇಲ್ಛಾವಣಿ ತುಂಬಾ ಹಳೆಯದು ಮತ್ತು ದುರ್ಬಲವಾಗಿದೆ ಎಂದು ಹಿಂದು ಕಡೆಯವರು ಸಲ್ಲಿಸಿರುವ ಮನವಿಯಲ್ಲಿ ತಿಳಿಸಲಾಗಿದೆ. ಈ ನೆಲಮಾಳಿಗೆಯ ಕಂಬಗಳಿಗೆ ದುರಸ್ತಿ ಅಗತ್ಯವಿದೆ ಎಂದು ಅದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!