ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮದ್ಯ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತು.
ಇಂದು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.
ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು, ‘ನನ್ನ ಜೀವನ ದೇಶಕ್ಕಾಗಿ ಮುಡಿಪಾಗಿದೆ’ ಎಂದು ಹೇಳಿದ್ದಾರೆ.
ಈ ಮಧ್ಯೆ ಜಾರಿ ನಿರ್ದೇಶನಾಲಯವು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರನ್ನು ಈಗ ರದ್ದುಗೊಳಿಸಿರುವ ದೆಹಲಿ ಮದ್ಯ ನೀತಿ ಪ್ರಕರಣದ ಪ್ರಮುಖ ಆರೋಪಿ ಎಂದು 10 ದಿನಗಳ ಕಸ್ಟಡಿಗೆ ಒಳಪಡಿಸುವಂತೆ ಕೋರಿದೆ.