ಕೊನೆಗೂ ದಳಪತಿ ಬೇಡಿಕೆಗೆ ಮಣಿದ ಬಿಜೆಪಿ: ಜೆಡಿಎಸ್ ಬತ್ತಳಿಕೆಯಲ್ಲಿ ಮೂರು ಕ್ಷೇತ್ರ ಖಾಯಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯಲ್ಲಿ ಕೇವಲ ಎರಡು ಸ್ಥಾನಕ್ಕಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಧಾನಿ ಮೋದಿ ನಾಯಕತ್ವದಲ್ಲಿ ನಡೆಯುವ ಸಮಾವೇಶದಲ್ಲಿ ಆಯಾ ಭಾಗದ ಜೆಡಿಎಸ್ ನಾಯಕರಿಗೆ ಆತ್ಮವಿಶ್ವಾಸ ತುಂಬುತ್ತಿಲ್ಲ. ಟಿಕೆಟ್ ಹಂಚಿಕೆ ಸಂದರ್ಭದಲ್ಲೂ ಜೆಡಿಎಸ್ ಸಲಹೆ ಪಡೆದಿಲ್ಲ ಎಂದು ಜೆಡಿಎಸ್ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.

ಆದರೆ ಇದೀಗ ಈ ಕೋಪವನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಬೆಂಗಳೂರಿನಲ್ಲಿ ಬಹಿರಂಗವಾಗಿ ಘೋಷಿಸಿದ್ದಾರೆ.

ಜೆಡಿಎಸ್ ಕಾರ್ಯಕರ್ತರೊಂದಿಗೆ ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುವಂತೆ ರಾಧಾಮೋಹನ್ ದಾಸ್ ಕರೆ ನೀಡಿದರು. ಬಿಜೆಪಿ ಮತ್ತು ಜೆಡಿಎಸ್ ನಡುವೆ ಸೀಟು ಹಂಚಿಕೆ ವಿಚಾರಕ್ಕೆ ಇದೀಗ ಅಂತ್ಯ ಕಂಡಿದೆ. ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಕೂಡ ದೆಹಲಿಗೆ ಭೇಟಿ ನೀಡಿ ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಆದರೆ, ಮಂಡ್ಯವನ್ನು ಜೆಡಿಎಸ್‌ ಉಸ್ತುವಾರಿ ವಹಿಸಿಕೊಂಡ ಮೇಲೆ ಸುಮಲತಾ ಅವರ ರಿಯಾಕ್ಷನ್ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!