ಬಿಜೆಪಿಗೆ ಅಡ್ಡ ಮತದಾನ ಮಾಡಿದ ಎಸ್‌ಪಿಯ 4 ಶಾಸಕರಿಗೆ Y- ಕೆಟಗರಿ ಭದ್ರತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ ಸಮಾಜವಾದಿ ಪಕ್ಷದ ನಾಲ್ವರು ಶಾಸಕರಿಗೆ ವೈ-ಕೆಟಗರಿ ಭದ್ರತೆ ನೀಡಲಾಗಿದೆ.

ಅಭಯ್ ಸಿಂಗ್ (ಗೋಸೈಗಂಜ್), ಮನೋಜ್ ಕುಮಾರ್ ಪಾಂಡೆ (ಉಂಚಹರ್), ರಾಕೇಶ್ ಪ್ರತಾಪ್ ಸಿಂಗ್ (ಗೌರಿಗಂಜ್) ಮತ್ತು ವಿನೋದ್ ಚತುರ್ವೇದಿ (ಕಲ್ಪಿ) ಶಾಸಕರು ವೈ-ಕೆಟಗರಿ ಭದ್ರತೆ ಪಡೆದುಕೊಂಡಿದ್ದಾರೆ.

ಬಿಜೆಪಿಯ ಅಭ್ಯರ್ಥಿ ಸಂಜಯ್ ಸೇಠ್ ಗೆಲುವಿಗಾಗಿ ಈ ನಾಲ್ವರು ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದರು.

ಮತ್ತೊಬ್ಬ ಶಾಸಕ ಮಹಾರಾಜಿ ಪ್ರಜಾಪತಿ ಗೈರಾಗಿದ್ದರು. ರಾಕೇಶ್ ಪಾಂಡೆ ಅವರು ಸಂಸದ ರಿತೇಶ್ ಪಾಂಡೆ ಅವರ ತಂದೆ. ಅವರು ಇತ್ತೀಚೆಗೆ ಬಿಎಸ್ಪಿಯಿಂದ ಬಿಜೆಪಿಗೆ ಸೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!