ಹೊಸದಿಗಂತ ವರದಿ ಶಿವಮೊಗ್ಗ :
ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿರುವ ಘಟನೆ ಇಂದು ಬೆಳಗ್ಗೆ ನಗರಕ್ಕೆ ಸಮೀಪದ ಮಲ್ಲಿಗೇನಹಳ್ಳಿಯಲ್ಲಿ ನಡೆದಿದೆ.
ಫಾರೂ ಬಂಧಿತ ಆರೋಪಿಯಾಗಿದ್ದು, ಈತನ ಮೇಲೆ ತುಂಗಾನಗರ ಠಾಣೆಯಲ್ಲಿ 302 ಪ್ರಕರಣ ದಾಖಲಾಗಿತ್ತು. ಬಳಿಕ ಈತ ತಲೆ ಮರೆಸಿಕೊಂಡಿದ್ದ. ತುಂಗಾನಗರ ಠಾಣೆಯ ಪಿಐ ಸತ್ಯನಾರಾಯಣ ಹಾಗೂ ಸಿಬ್ಬಂದಿಗಳು ಬಂಧಿಸಲು ಹೋಗಿದ್ದಾಗ ಸಿಬ್ಬಂದಿ ನಾಗಪ್ಪ ಎಂಬುವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಮುಂದಾದಾಗ ಪಿಐ ಸತ್ಯನಾರಾಯಣ ಗುಂಡು ಹೊಡೆದಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.