ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್ಡಿ ಕುಮಾರಸ್ವಾಮಿ ಆಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ(K P Bachegowda) ಹಾಗೂ ಬೆಂಬಲಿಗರು ಇಂದು(ಮಾ.31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಯಾಗಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ಗೆ ಟಿಕೆಟ್ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಕಾಂಗ್ರೆಸ್ಗೆ ಸೇರಿದ್ದಾರೆ. ಇವರ ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ 50ಕ್ಕೂ ಹೆಚ್ಚು ಜನ ಮುಖಂಡರು ಕಾಂಗ್ರೆಸ್ ಸೇರಿದರು. ಇನ್ನು ಏಪ್ರಿಲ್ 2 (ಮಂಗಳವಾರ)ರಂದು ಅಧಿಕೃತವಾಗಿ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.