ಕಾಂಗ್ರೆಸ್‌ ಸೇರ್ಪಡೆಯಾದ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌ ಪತ್ನಿ ವಾಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿವೃತ್ತ ಐಎಎಸ್‌ ಅಧಿಕಾರಿ ದಿ. ಕೆ.ಶಿವರಾಮ್‌ (K.Shivaram) ಪತ್ನಿ ವಾಣಿ ಅವರು ಸೋಮವಾರ ಕಾಂಗ್ರೆಸ್‌ (Congress) ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದ ವಾಣಿ ಶಿವರಾಮ್‌ ಅವರಿಗೆ ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಪಕ್ಷಕ್ಕೆ ಡಿ.ಕೆ.ಶಿವಕುಮಾರ್‌ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ವಾಣಿ ಶಿವರಾಮ್‌, ಬಿಜೆಪಿಯಿಂದ ನಮ್ಮ ಯಜಮಾನರಿಗೆ (ಕೆ.ಶಿವರಾಮ್) ಆದ ಅನ್ಯಾಯಕ್ಕೆ ಮತ್ತು ಅವರ ಸಾವಿಗೆ ನ್ಯಾಯ ಕೊಡಿ ಎಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಕಾಂಗ್ರೆಸ್‌ ಪಕ್ಷ ನನ್ನನ್ನು ಗುರುತಿಸಿ ಕೈ ಹಿಡಿದಿದೆ. ನಿಮ್ಮೆಲ್ಲರ ಸೇವೆಗಾಗಿ ನಾನು ಸದಾ ಇರುತ್ತೇನೆ. ನನ್ನ ಪತಿಯ ಕೊನೆ ಆಸೆಗಳನ್ನು ಈಡೇರಿಸಲು ಕಾಂಗ್ರೆಸ್‌ ಪಕ್ಷದಲ್ಲಿ ನಾನು ಇರುತ್ತೇನೆ. ನಮ್ಮ ಯಜಮಾನರಿಗೆ ಆದ ಅನ್ಯಾಯಕ್ಕೆ ನೀವೆಲ್ಲ ಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!