ದಿಗಂತ ವರದಿ ಬಳ್ಳಾರಿ:
30 ಜನ ಸಚಿವರು ಬಂದರೂ ಬಳ್ಳಾರಿ ಎಸ್ಟಿ ಮೀಸಲು ಕ್ಷೇತ್ರದ ನಮ್ಮ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ದಾಖಲೆ ಮತಗಳ ಅಂತರಗಳಿoದ ಗೆಲುವು ಸಾಧಿಸಲಿದ್ದಾರೆ, ಇದರಲ್ಲಿ ಅನುಮಾನವೇ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಗಾಂಧಿ ಬಡಾವಣೆಯ ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭ್ಯರ್ಥಿ ಶ್ರೀರಾಮುಲು ಅವರ ಪರ ಮತಯಾಚನೆಗೆ ಆಗಮಿಸಲಿದ್ದಾರೆ, ಕಾಂಗ್ರೆಸ್ ಎಸ್ಟೇ ಹೋರಾಟ ನಡೆಸಿದರೂ ಭವಿಷ್ಯದ ದೃಷ್ಟಿಯಿಂದ ಜನರು ಬಿಜೆಪಿ ಬೆಂಬಲಿಸುವ ವಿಶ್ವಾಸವಿದೆ. ಬಳ್ಳಾರಿಯ ನಮ್ಮ ಅಭ್ಯರ್ಥಿ ಶ್ರೀರಾಮುಲು ಅವಧಿಯಲ್ಲಿ ಅವಳಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದು, ಕ್ಷೇತ್ರದ ಜನರು ದಾಖಲೆ ಮತಗಳ ಅಂತರಗಳಿoದ ಗೆಲ್ಲಿಸಲಿದ್ದಾರೆ.