ಹೊಸದಿಗಂತ ವರದಿ, ಮೈಸೂರು:
ಕೌಟುಂಬಿಕ ಕಲಹದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಗರದ ಸರ್ಧಾರ್ ವಲ್ಲಭಬಾಯ್ ಪಟೇಲ್ ನಗರ ವೃತ್ತದ ಬಳಿ (ನಾಡನಹಳ್ಳಿ ಗೇಟ್ ) ಬಳಿ ಘಟನೆ ನಡೆದಿದೆ. ಶಿಲ್ಪಾ (೨೬) ಮೃತ ಮಹಿಳೆ. ಘಟನೆಗೆ ಸಂಬoಧಿಸಿದoತೆ ಆಕೆಯ ಪತಿ ಮಹೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಹೇಶ್- ಶಿಲ್ಪಾ ದಂಪತಿ ಮೂಲತಃ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ನವಿಲೂರಿನವರು. ಈ ದಂಪತಿಗೆ ೬ ಹಾಗೂ ೪ ವರ್ಷದ ಇಬ್ಬರು ಮಕ್ಕಳಿದ್ದಾರೆ. ಮಹೇಶ್, ಜೂಜಿನ ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದ. ಈ ಕಾರಣಕ್ಕೆ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಿತ್ತು. ಕಲಹ ವಿಕೋಪಕ್ಕೆ ತಿರುಗಿದಾ ಕುಪಿತಗೊಂಡಿದ್ದ ಮಹೇಶ್ ಶಿಲ್ಪಾಳನ್ನು ಮಚ್ಚಿನಿಂದ ಕೊಚ್ಚಿ ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ವಿಷಯ ತಿಳಿಯುತ್ತಿದ್ದಂತೆ ಆಲನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ರಕ್ತದ ಮಡುವಿನಲ್ಲಿದ್ದ ಶಿಲ್ಪರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು.
ಪರಾರಿಯಾಗಿದ್ದ ಮಹೇಶ್ ನನ್ನು ಆಲನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಸ್ವರ್ಣ ಮತ್ತು ಸಿಬ್ಬಂದಿ ಬಂಧಿಸಿ ಜೈಲಿಗಟ್ಟಿದ್ದಾರೆ.