ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ತೊರ್ನಳ್ಳಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ.
ತಹಶೀಲ್ದಾರ್ ಹಾಗೂ ಶಾಸಕರು ಭೇಟಿ ಮಾಡಿ ಮನವೊಲಿಸಲು ಪ್ರಯತ್ನಪಟ್ಟರೂ ವಿಫಲವಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ. ಕೆ.ಸಿ ವ್ಯಾಲಿ ನೀರು ಗ್ರಾಮದ ಕೆರೆಗೆ ಹರಿಸಬೇಕು ಎಂದು ಆಗ್ರಹಿಸಿದ್ದಾರೆ. ತೊರ್ನಳ್ಳಿ ಗ್ರಾಮದಲ್ಲಿ 2200 ಮತಗಳು ಇವೆ. ಆದರೆ ಯಾರೊಬ್ಬರೂ ಮತದಾನಕ್ಕೆ ಮುಂದಾಗುತ್ತಿಲ್ಲ.