ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದು ತಪ್ಪು, ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ಮೊಮ್ಮಗ ಮಹಿಳೆಯರ ಜೊತೆ ಈ ರೀತಿ ನಡೆದುಕೊಂಡಿದ್ದು ನಿಜಕ್ಕೂ ಖಂಡನೀಯ ಎಂದು ಎಐಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷೆ ಸುಪ್ರಿಯಾ ಶ್ರಿನೆಟ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಪ್ರಿಯಾ ಶ್ರಿನೆಟ್ ಅವರು , ಪ್ರಜ್ವಲ್ ರೇವಣ್ಣ ಸದ್ಯ ದೇಶ ಬಿಟ್ಟು ಓಡಿ ಹೋಗಿದ್ದಾನೆ. ಪ್ರಧಾನಿ ಮೋದಿ ಅವರು ಮೈತ್ರಿ ಅಭ್ಯರ್ಥಿಯಾಗಿ ಇಂತವರನ್ನ ಚುನಾವಣೆಗೆ ಸ್ಪರ್ಧೆ ಮಾಡಿಸಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಜ್ವಲ್ಗೆ ರಾಕ್ಷಸ ಎನ್ನಬೇಕು. ನೂರಾರು ಮಹಿಳೆಯರನ್ನ ರೇಪ್ ಮಾಡಿದ್ದಾನೆ. 3000 ಕ್ಕೂ ಹೆಚ್ಚು ವಿಡಿಯೋಗಳು ಇವೆ. ಇದು ಸೆಕ್ಸ್ ಸ್ಕ್ಯಾಂಡಲ್ ಅಲ್ಲ, ಸಾಮೂಹಿಕ ಬಲಾತ್ಕಾರ ಮಾಡಿದ್ದಾನೆ. ಮಹಿಳೆಯರು ಏನು ತಪ್ಪು ಮಾಡಿದ್ದಾರೆ. ಮನೆಯಲ್ಲಿ ಕೆಲಸ ಮಾಡುವರು, ಪಕ್ಷದ ಮಹಿಳಾ ಕಾರ್ಯಕರ್ತರು, ಜಿಲ್ಲಾ ಪಂಚಾಯತ್ಸದಸ್ಯ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾನೆ. ಮೋದಿ ಅವರು ಇಂತವರ ಪರವಾಗಿ ಪ್ರಚಾರ ಮಾಡಿದ್ದಾರೆ. ಎಲ್ಲವೂ ಗೊತ್ತಿದ್ದರು ಪ್ರಜ್ವಲ್ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಪ್ರಜ್ವಲ್ ರೇವಣ್ಣರ ಬಗ್ಗೆ ಡಿಸೆಂಬರ್ನಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಮುಖಂಡರೊಬ್ಬರು ಪತ್ರ ಬರೆದಿದ್ದರು ಇಷ್ಟಾದ್ರೂ ಇವನಿಗೆ ಮೈತ್ರಿ ಅಭ್ಯರ್ಥಿ ಮಾಡಿದ್ದರು. ಫೆಬ್ರುವರಿ, ಮಾರ್ಚ್ನಲ್ಲಿ ಅಮಿತ್ ಶಾ ಮೈಸೂರಿನಲ್ಲಿ ಪ್ರಚಾರ ಮಾಡಿದ್ದಾರೆ. ಪ್ರಜ್ವಲ್ನ ರಾಸಲೀಲೆಯ ಬಗ್ಗೆ ಎಲ್ಲವೂ ಮೊದಲೇ ಬಿಜೆಪಿಗೆ ಗೊತ್ತಿದೆ. ಮೋದಿ ಅವರು ಇದಕ್ಕೆ ಉತ್ತರ ಕೊಡಬೇಕು. ಇಂತಹ ರಾಕ್ಷಸರ ಜೊತೆ ಯಾಕೆ ಮೋದಿ ಅವರು ಪ್ರಜ್ವಲ್ ಜೊತೆ ವೇದಿಕೆ ಶೇರ್ ಮಾಡಿದ್ರು. ಯಾಕೆ ಸುಮ್ಮನಿದ್ದಾರೆ ಮೋದಿ?, ಸ್ಮೃತಿ ಇರಾಣಿ ಎಲ್ಲಿದ್ದಾರೆ ಎಂದು ಸುಪ್ರಿಯಾ ಶ್ರಿನೆಟ್ ಪ್ರಶ್ನೆ ಮಾಡಿದ್ದಾರೆ.
ಎಸ್ಐಟಿಗೆ ಪ್ರಕರಣ ವಹಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಿದ್ದಾರೆ. ಬಿಜೆಪಿ ಪಕ್ಷ ಇಂತವರಿಗೆ ಸಂರಕ್ಷಣೆ ಮಾಡುತ್ತಾರೆ. ಬಿಜೆಪಿ ಪಕ್ಷ ಇಂತಹ ಆರೋಪಿಗಳಿಗೆ ಸಾಥ್ ಕೊಡ್ತಾ ಇದೆ. ಮಹಿಳೆಯರ ಅನ್ಯಾಯ ಆದ್ರೆ ಮೋದಿ ಸರ್ಕಾರ ನ್ಯಾಯ ನೀಡುತ್ತಿಲ್ಲ. ಪ್ರಜ್ವಲ್ಗೆ ಸರಿಯಾದ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ.