ಹರಿಹರದಲ್ಲಿ ಮತ್ತೆ ಎಂಟ್ರಿ ಕೊಟ್ಟ ವ್ಯಾಘ್ರ, ಹಸು ಬಲಿ!

ದಿಗಂತ ವರದಿ ಮಡಿಕೇರಿ:

ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ.
ಹರಿಹರ ಗ್ರಾಮದ ಮುಕ್ಕಾಟಿರ ವಿನಯ್ ಎಂಬವರ ಗಬ್ಬದ ಹಸುವಿನ ಮೇಲೆ ಗುರುವಾರ ಬೆಳಗಿನ ಜಾವ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.

ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಹಸುವಿನ ಮೇಲೆ ಬೆಳಗಿನ ಜಾವ 4.30ರ ಸುಮಾರಿಗೆ ಹುಲಿ ದಾಳಿ ನಡೆಸಿದೆ.
ಕಳೆದ 20 ದಿನಗಳ ಹಿಂದೆ ಹರಿಹರ ಗ್ರಾಮದ ದೇವಾಲಯದ ಬಳಿಯ ಕೆರೆಯಲ್ಲಿ ಹುಲಿ ಪತ್ತೆಯಾಗಿತ್ತು. ಅದಾದ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದರೂ ಹುಲಿ ಪತ್ತೆಯಾಗಿರಲಿಲ್ಲ. ಇದೀಗ ಮತ್ತೆ ಹರಿಹರ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡು ಈ ಭಾಗದ ಜನರಲ್ಲಿ ಭೀತಿ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!