ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದೆರಡು ದಿನಗಳಿಂದ ರಾಜ್ಯದ ಕೆಲವೆಡೆ ಭರ್ಜರಿ ಮಳೆಯಾಗಿದೆ. ಆದರೆ ಗಡಿನಾಡು ಬೀದರ್ನಲ್ಲಿ ಮಾತ್ರ ಬಿಸಿಲು ಅತಿಯಾಗಿದೆ. ಬಿಸಿಲ ಝಳಕ್ಕೆ ನರೇಗಾ ಉದ್ಯೋಗ ಖಾತ್ರಿ ಕಾರ್ಮಿಕ ಮೃತಪಟ್ಟಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿಟ್ಟಾ ಗ್ರಾಮದ ಮಲ್ಲಪ್ಪ ತೊಗರಖೇಡೆ (58) ನಿಧನರಾಗಿದ್ದಾರೆ. ಬಿಸಿಲ ತಾಪಕ್ಕೆ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದ ವೇಳೆ ಮಲ್ಲಪ್ಪ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.