ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆ: 8 ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ, ಕಲಬುರಗಿ:

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ 2024ರ ಜೂನ್ 3ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಮಂಗಳವಾರ ಎಂಟು ಅಭ್ಯರ್ಥಿಗಳಿಂದ ಹತ್ತು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಚಂದ್ರಶೇಖರ ಬಸವರಾಜ ಅವರು ಒಟ್ಟು ಮೂರು ನಾಮಪತ್ರ ಸಲ್ಲಿಸಿದ್ದಾರೆ. ಉಳಿದಂತೆ ಪಕ್ಷೇತರ ಅಭ್ಯರ್ಥಿಗಳಾಗಿ ಮಲ್ಲಿಕಾರ್ಜುನ ವೀರಣ್ಣ ಧುತ್ತರಗಾಂವ, ಎನ್. ಪ್ರತಾಪರೆಡ್ಡಿ ಎನ್. ಗೌರಣ್ಣ, ಎನ್. ಶೈಲಾಜಾ ರೆಡ್ಡಿ ಎನ್. ಪ್ರತಾಪ ರೆಡ್ಡಿ, ಮಹೆಬೂಬ್ ಮೊಹಮ್ಮದ್ ಖಾಜಾ ಹುಸೇನ್ ವಂಟೇಲಿ, ಅನಿಮೇಶ ಮಹಾರುದ್ರಪ್ಪ, ಎಮ್.ಡಿ. ಅಮನ್ ಎಮ್.ಡಿ. ಶೇಖ್ ಝಹೂರ್‍ಸಾಬ್ ಹಾಗೂ ಶರಣಬಸಪ್ಪ ಪೀರಪ್ಪ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಮೇ 20 ಇರುತ್ತದೆ. ಇಲ್ಲಿಯವರೆಗೆ 9 ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಸಿದಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!