WEATHER | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಆರೆಂಜ್‌ ಅಲರ್ಟ್‌ ಎಲ್ಲೆಲ್ಲಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮಳೆಯ ಆಗಮನವಾಗಿದೆ. ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಈ‌ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡದಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದ್ದು, ಮೇ 24ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಲಿದೆ.

ಯಲ್ಲಾಪುರ, ಎಚ್​ಡಿಕೋಟೆ, ಕೊಳ್ಳೇಗಾಲ, ಸಿರಾ, ಯುಗಟಿಯಲ್ಲಿ ಹೆಚ್ಚು ಮಳೆಯಾಗಿದೆ. ಹೊನ್ನಾವರ, ದೇವನಹಳ್ಳಿ, ಶ್ರವಣಬೆಳಗೊಳ, ಭಾಗಮಂಡಲ, ಕಿರವತ್ತಿ, ಮಂಗಳೂರು, ಹಗರಿಬೊಮ್ಮನಹಳ್ಳಿ, ಹೊಸದುರ್ಗಾ, ಚನ್ನರಾಯಪಟ್ಟಣ, ಶಿವಮೊಗ್ಗ, ದಾವಣಗೆರೆ, ಮಾಣಿ, ಸಂತೆಬೆನ್ನೂರು, ಹರಪನಹಳ್ಳಿ, ಮಂಕಿ, ನಿಪ್ಪಾಣಿ, ಬರಗೂರು, ಸಂಡೂರು, ಹೊಸಕೋಟೆ, ಪರಶುರಾಂಪುರ, ಕೂಡ್ಲಿಗಿ, ಸುಳ್ಯ, ಧರ್ಮಸ್ಥಳ, ಕದ್ರಾ, ಕಡೂರು, ಎನ್​ಆರ್​ಪುರ, ಉಪ್ಪಿನಂಗಡಿ, ಹಳಿಯಾಳ, ಮೂಡಿಗೆರೆ, ಮುಂಡಗೋಡು, ಸಿಂಧನೂರು, ಹುಣಸೂರು, ಕೊಟ್ಟೂರು, ಕೃಷ್ಣರಾಜಪೇಟೆ, ಗೌರಿಬಿದನೂರು, ಹೆಬ್ಬೂರು, ನಾಪೋಕ್ಲು, ನಾಗಮಂಗಲ, ಕುಶಾಲನಗರ, ಚಿತ್ರದುರ್ಗ, ಮಾಗಡಿ, ಬೇಲೂರು, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!