ದೂರು ಕೊಡಲು ಇಚ್ಛಿಸೋ ಸಂತ್ರಸ್ತೆಯರಿಗೆ ರಕ್ಷಣೆ ಕೊಡ್ತೇವೆ: ಪರಮೇಶ್ವರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಿಂಗಳಿನಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಸಂಸದ ಪ್ರಜ್ವ್‌ಲ್‌ ರೇವಣ್ಣ ಕಡೆಗೂ ಭಾರತಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ತಡರಾತ್ರಿ ಎಸ್‌ಐಟಿ ಪ್ರಜ್ವಲ್‌ರನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಗೃಹಸಚಿವ ಜಿ.ಪರಮೇಶ್ವರ್ ಮಾತನಾಡಿದ್ದಾರೆ.

ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್‍ಐಟಿ ಮುಂದೆ ಬಂದು ದೈರ್ಯವಾಗಿ ಹೇಳಿಕೊಳ್ಳಬೇಕು. ಈ ಹಿಂದೆಯೇ ಅವರಿಗೆ ರಕ್ಷಣೆ ಕೊಡುವುದಾಗಿ ಹೇಳಿದ್ದೇವೆ, ಈಗಲೂ ಹೇಳ್ತೇವೆ ಬನ್ನಿ ಧೈರ್ಯವಾಗಿ ಮಾತನಾಡಿ ಎಂದಿದ್ದಾರೆ.

ಅಧಿಕಾರಿಗಳು ಅವರ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಅಧಿಕಾರಿಗಳಿಗೆ ಅವರು ಸಹಕಾರ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಸಹಜವಾಗಿಯೇ ಅವರು ತನಿಖೆಗೆ ಸಹಕಾರ ಕೊಡಬೇಕು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!