ದಿಗಂತ ವರದಿ ಹುಬ್ಬಳ್ಳಿ:
ಸಂಸದ ಪ್ರಜ್ವಲ್ ರೇವಣ್ಣ ಅವರ ಎನ್ನಲಾದ ಪೆನ್ ಡ್ರೈವ್ ಪ್ರಕರಣ ತನಿಖೆ ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ತನ್ನದೇ ಆದ ಪ್ರಕ್ರಿಯೆ ನಡೆಸಲಿದೆ . ಕಾನೂನಾತ್ಮಕವಾಗಿ ಪ್ರಜ್ವಲ್ ರೇವಣ್ಣ ಶರಣಾಗಿದ್ದಾನೆ . ಎಸ್ ಐ ಟಿ ಯವರು ಕಟ್ಟಿಬದ್ಧವಾಗಿ ತನಿಖೆ ಮಾಡಬೇಕು. ಈ ನಿಟ್ಟಿನಲ್ಲಿಯೇ ತನಿಖೆ ನಡೆಯಬೇಕೆಂಬುದು ರಾಜ್ಯದ ಜನರ ಇಚ್ಛೆಯಾಗಿದೆ ಎಂದರು.
ಪ್ರಜ್ವಲ್ ಪ್ರಕರಣ ರಾಜಕೀಯ ಪ್ರೇರಿತ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣ ಯಾವ ರೀತಿ ಬೆಳಕಿಗೆ ಬಂದಿತು . ಯಾರು ಫೆನ್ ಡ್ರೈವ್ ಹಂಚಿಕೆ ಮಾಡಿದರು, ಯಾಕೆ ಮಾಡಿದರು . ಇದೆಲ್ಲವನ್ನು ನೋಡಿದಾಗ ಇದರಲ್ಲಿ ರಾಜಕಾರಣ ಬೆರೆತಿರೋದು ಸ್ಪಷ್ಟ. ಘಟನೆಯ ಸಂತ್ರಸ್ತರಿಗೆ ನ್ಯಾಯ ಕೊಡುವುದು ಒಂದು ಭಾಗ. ಇನ್ನೂ ಪೆನ್ ಡ್ರೈವ್ ಹಂಚಿಕೆ ಮಾಡಿದವರ ವಿರುದ್ಧ ತನಿಖೆ ನಡೆಸಬೇಕು.
ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಿಬಿಐ ತನಿಖೆಗೆ ಯೋಗ್ಯವಾದ ಪ್ರಕರಣ ಎಂದರು.