ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ಕುಮಾರ್ ಅವರು ಸೋಲು ಕಂಡಿದ್ದಾರೆ. ಅವರ ಪರವಾಗಿ ನಟ ಶಿವರಾಜ್ಕುಮಾರ್ ಅವರು ಸಿಕ್ಕಾಪಟ್ಟೆ ಪ್ರಚಾರ ಮಾಡಿದ್ದರು.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಜಯ ಸಾಧಿಸಿದ್ದಾರೆ.
ಚುನಾವಣಾ ಫಲಿತಾಂಶದ ಬಗ್ಗೆ ಶಿವರಾಜ್ಕುಮಾರ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
‘ಧನ್ಯವಾದಗಳು… ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತಾ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದು ಶಿವರಾಜ್ಕುಮಾರ್ ಅವರು ಪೋಸ್ಟ್ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್. ಈಶ್ವರಪ್ಪ ಸ್ಪರ್ಧಿಸಿದ್ದರು. ಜಿಜೆಪಿಯಿಂದ ಬಿ.ವೈ. ರಾಘವೇಂದ್ರ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ಪರವಾಗಿ ಗೀತಾ ಶಿವರಾಜ್ಕುಮಾರ್ ಅವರು ಸ್ಪರ್ಧಿಸಿದ್ದರು. ಈ ಮೂವರ ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿ.ವೈ. ರಾಘವೇಂದ್ರ ಅವರು 7,78,721 ಮತಗಳನ್ನು ಪಡೆದು ಜಯ ಸಾಧಿಸಿದರು. 2,43,715 ಮತಗಳ ಅಂತರದಲ್ಲಿ ಅವರು ಗೆಲುವು ಸಾದಿಸಿದರು. ಗೀತಾ ಶಿವರಾಜ್ಕುಮಾರ್ ಅವರು 5,35,006 ಮತಗಳನ್ನು ಪಡೆದರು.
ಇವೆಲ್ಲಾ ಬೇಕಿತ್ತಾ… ಯಾವುದೇ ಅರ್ಹತೆ ಇಲ್ಲದೆ ಕೇವಲ ಅಪ್ಪನ ಹೆಸರಿನಲ್ಲಿ ನಿಂತರೆ ಹೆಸರು ಕೆಡುವುದೇ ಹೊರತು ಬೇರೇನೂ ಇಲ್ಲ.
Inu saaku. Nimma family ge raajakiya beda