ಈ ಉತ್ತಮ ಸಮಯ ಮತ್ತೆ ಸಿಗಲ್ಲ: ಮೋದಿ ಜೊತೆ ಕೈಜೋಡಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಈ ಉತ್ತಮ ಸಮಯ ಕಳೆದುಕೊಂಡರೆ ಮತ್ತೆ ಸಿಗಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಎನ್‍ಡಿಎ ಒಕ್ಕೂಟ ಸಂಸದರ ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ಹೆಸರನ್ನೇ ಪ್ರಧಾನಿ ಸ್ಥಾನಕ್ಕೆ ಸೂಚಿಸಿದ್ದಾರೆ. ಬಳಿಕ ಮಾತನಾಡಿದ ಜೆಡಿಯು ನಾಯಕ ನಿತೀಶ್ ಕುಮಾರ್, ಭಾರತ ಬೆಳೆಯುತ್ತಿದೆ. ಉತ್ತಮ ನಾಯಕ, ಉತ್ತಮ ಸಮಯ ಮತ್ತೆ ಸಿಗುವುದಿಲ್ಲ. ಇದು ನಮಗೆ ಉತ್ತಮ ಅವಕಾಶ. ಈಗ ಇದನ್ನು ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ ಎಂದು ಹೇಳಿದರು.

ಮೋದಿಯವರು ದೇಶದ ಸೇವೆ ಮಾಡಿದ್ದಾರೆ, ಮುಂದಿನ ಅವಧಿಯಲ್ಲಿ ಏನು ಬಾಕಿ ಉಳಿದಿದೆಯೋ ಅದನ್ನೂ ಮಾಡಲಿದ್ದಾರೆ. ಮೋದಿ ಅವರಿಗೆ ಈಗ ಮತ್ತೊಂದು ಅವಕಾಶ ಸಿಕ್ಕಿದೆ. ಅಲ್ಲೂ ಇಲ್ಲೂ ಕೆಲವರು ಗೆದ್ದಿದ್ದಾರೆ. ಆದರೆ ಮುಂದಿನ ಬಾರಿ ಎಲ್ಲರೂ ಸೋಲಲಿದ್ದಾರೆ ಎಂದು ನಿತೀಶ್‌ ಕುಮಾರ್‌ ಹೇಳಿದರು.

ಬಿಹಾರದಲ್ಲಿ ಏನು ಬಾಕಿ ಉಳಿದಿದೆ ಅದನ್ನು ಕೂಡ ಮೋದಿಯವರು ಮಾಡಲಿದ್ದಾರೆ. ಅದಕ್ಕಾಗಿ ನಾವು ಎಲ್ಲಾ ಬೆಂಬಲ ನೀಡಿದ್ದೇವೆ. ಆದಷ್ಟು ಬೇಗ ಅವರು ಪ್ರಧಾನಿಯಾಗಲಿ. ಇವತ್ತೆ ಪ್ರಧಾನಿಯಾಗಬೇಕಿತ್ತು. ಆ ಕಡೆ ಈ ಕಡೆ ಹೋಗುವವರಿಗೆ ಯಾವುದೇ ಲಾಭ ಇಲ್ಲ ಎಂದು ನಿತೀಶ್ ಕುಮಾರ್ I.N.D.I.A ಒಕ್ಕೂಟಕ್ಕೆ ಟಾಂಗ್ ಕೊಟ್ಟರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಗಯಾಕ್ಷೇತ್ರವನ್ನು ಕಾಶಿಯ ರೀತಿ ಅಭಿವೃದ್ಧಿ ಗೊಳಿಸುವದು ಅಗತ್ಯವಿದೆ.

LEAVE A REPLY

Please enter your comment!
Please enter your name here

error: Content is protected !!