ಆಹಾರ ಸಂಸ್ಕರಣಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ: 3 ಮಂದಿ ಸಾವು, ಆರು ಮಂದಿಗೆ ಗಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಉತ್ತರ ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಆಹಾರ ಸಂಸ್ಕರಣಾ ಕಾರ್ಖಾನೆಯಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಪಿಸಿಆರ್ ಕರೆಯನ್ನು ಮುಂಜಾನೆ 3:35 ರ ಸುಮಾರಿಗೆ ಸ್ವೀಕರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಮತ್ತು ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ, ಘಟನೆ ನಡೆದಾಗ ಒಂಬತ್ತು ಮಂದಿ ಕಾರ್ಖಾನೆಯೊಳಗಿದ್ದರು. ತಕ್ಷಣ ಅವರನ್ನು ನರೇಲಾದ ಎಸ್‌ಎಚ್‌ಆರ್‌ಸಿ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಗೊಂಡವರಲ್ಲಿ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಗ್ಯಾಸ್ ಬರ್ನರ್‌ಗಳಲ್ಲಿ ಕಚ್ಚಾ ಮೂಂಗ್ ಅನ್ನು ಹುರಿಯುತ್ತಿದ್ದಾಗ, ಗ್ಯಾಸ್‌ನ ಪೈಪ್‌ಲೈನ್‌ನಲ್ಲಿ ಅನಿಲ ಸೋರಿಕೆಯಾಗಿದೆ ಇದರಿಂದ ಸ್ಫೋಟಕ್ಕೆ ಕಾರಣವಾಯಿತು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!