ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್ಐಟಿ (SIT) ಅಧಿಕಾರಿಗಳು ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಈ ಮೂಲಕ 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮನವಾಗಿದೆ.
ಡಿವೈಎಸ್ಪಿ ಸತ್ಯನಾರಾಯಣ ನೇತೃತ್ವದಲ್ಲಿ ಕ್ಯೂಆರ್ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ನಿವಾಸಕ್ಕೆ ಕರೆದೊಯ್ಯಲಾಯಿತು. ಎಸ್ಐಟಿ ಅಧಿಕಾರಿಗಳೊಂದಿಗೆ ಎಫ್ಎಸ್ಎಲ್ ಅಧಿಕಾರಿಗಳು ಸಹ ಮಾಹಿತಿ ಕಲೆಹಾಕುತ್ತಿದ್ದಾರೆ.