ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ಮತ ಹಾಕಿಲ್ಲ, ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸಲಿ: ಎಂ.ಲಕ್ಷ್ಮಣ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಇಷ್ಟವಾಗಿಲ್ಲ. ಹಾಗಾಗಿ ಅದರ ವಿರುದ್ಧ ಮಾತನಾಡುತ್ತಿರೋ ಬಿಜೆಪಿಗರಿಗೆ ಜನರು ಮತ ಹಾಕಿದ್ದಾರೆ. ಈ ಹಿನ್ನಲೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸೋದು ಒಳ್ಳೇದು ಎಂದು ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ನಿಲ್ಲಿಸುವುದು ಒಳ್ಳೇದು, ಜನರಿಗೆ ಕಾಂಗ್ರೆಸ್ ಗ್ಯಾರಂಟಿಗಳು ಇಷ್ಟವಿಲ್ಲವೆಂದು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ವಿರುದ್ಧ ಮಾತನಾಡಿರೋ ಬಿಜೆಪಿಗೆ ಜನರು ಬೆಂಬಲ ನೀಡಿದ್ದಾರೆ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಬಗ್ಗೆ ಮರು ಪರಿಶೀಲನೆ ಅತ್ಯಗತ್ಯವಿದೆ. ನಾನು ಸಿಎಂ ಸಿದ್ಧರಾಮಯ್ಯ ಅವರಲ್ಲಿ ಕೋರುತ್ತೇನೆ ದಯವಿಟ್ಟು ಗ್ಯಾರಂಟಿ ಯೋಜನೆಗಳ ಬಗ್ಗೆ ಮರು ಪರಿಶೀಲಿಸಿ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!