ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿಗೆ ಒಲಿದ ಸಚಿವ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನರೇಂದ್ರ ಮೋದಿ ಅವರು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಸತತ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ (Prime Minister Narendra Modi ಸ್ವೀಕಾರ ಮಾಡಲಿದ್ದಾರೆ.

ಇತ್ತ ಕೇರಳದಿಂದ ಆಯ್ಕೆಯಾದ ಬಿಜೆಪಿಯ ಏಕೈಕ ಸಂಸದ ಸುರೇಶ್ ಗೋಪಿ ಅವರಿಗೆ ಇಂದು ಮೋದಿ 3.0 ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಲು ಸಿದ್ಧರಾಗಿದ್ದಾರೆ.

ಮೋದಿ ಮತ್ತು ನಂತರ ಅಮಿತ್ ಶಾ ಇಬ್ಬರೂ ಸುರೇಶ್ ಗೋಪಿ ಅವರಿಗೆ ಕರೆ ಮಾಡಿದ್ದಾರೆ.

ಈ ಕುರಿತು ಖುಷಿಹಂಚಿಕೊಂಡ ಅವರು, ಮೋದಿಯವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಮತ್ತು ಅದನ್ನು ಪಾಲಿಸುತ್ತಿದ್ದೇನೆ, ನನಗೆ ಯಾವ ಹುದ್ದೆ ನೀಡುತ್ತಿದ್ದಾರೆ ಎಂದು ಗೊತ್ತಿಲ್ಲ ಎಂದು ಸುರೇಶ್ ಗೋಪಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!