ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನ ತರೀಕೆರೆಯ ಹೆಬ್ಬೆ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತನನ್ನು ಹೈದರಾಬಾದ್ (Hyderabad) ಮೂಲದ ಶ್ರವಣ್ (25) ಎಂದು ಗುರುತಿಸಲಾಗಿದೆ.

ಶ್ರವಣ್ ತನ್ನ ಸ್ನೇಹಿತನ ಜೊತೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಕಲ್ಲತ್ತಿಗಿರಿ, ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಬಂದಿದ್ದನು. ಇಬ್ಬರು ಸೋಮವಾರ ಹೆಬ್ಬೆ ಜಲಪಾತಕ್ಕೆ ಭೇಟಿ ನೀಡಿದ್ದು,ಈ ವೇಳೆ ಬಂಡೆ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಕಾಲು ಜಾರಿ ನೀರಿನೊಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನ ಸ್ನೇಹಿತ ಹಾಗೂ ಇತರೆ ಪ್ರವಾಸಿಗರು ಆತನನ್ನ ಮೇಲಕ್ಕೆತ್ತಿದ್ದಾರೆ. ನಂತರ ಚಿಕಿತ್ಸೆಗಾಗಿ ತರಿಕೆರೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಆಸ್ಪತ್ರೆ ಆವರಣದಲ್ಲೇ ಯುವಕ ಸಾವನ್ನಪಿದ್ದಾನೆ.

ಈ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!