ಹೊಸದಿಗಂತ ವರದಿ,ಮೈಸೂರು:
ಅಂತರರಾಷ್ಟ್ರೀಯ ಖ್ಯಾತ ಸರೋದ್ ವಾದಕರಾದ ಪಂ.ರಾಜೀವ್ ತಾರಾನಾಥ್ ಅವರು ಇಂದು ಸಂಜೆ 6.30ಕ್ಕೆ ಮಣಿಪಾಲ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.
ನಾಳೆ (ಬುಧವಾರ ) ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕುವೆಂಪುನಗರದ ಜ್ಞಾನ ಗಂಗಾ ಶಾಲೆ ಹತ್ತಿರದ ಅವರ ಮನೆಯ ಎದುರು ಸಾರ್ವಜನಿಕ ದರುಶನಕ್ಕೆ ಇಡಲಾಗುತ್ತದೆ.
ಮಧ್ಯಾಹ್ನ 2 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.