ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಸಹೋದರಿ ಪ್ರಿಯಾಂಕಾ ವಾರಾಣಸಿಯಿಂದ ಲೋಕಸಭೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು 2ರಿಂದ 3ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಯ್ಬರೇಲಿ ಕೃತಜ್ಞತಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಾರಾಣಸಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮೋದಿಯವರ ನೀತಿಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ ಎಂದರು.
ಹಿಂಸಾಚಾರ ಮತ್ತು ದ್ವೇಷದ ರಾಜಕೀಯದಲ್ಲಿ ಬಹಿರಂಗವಾಗಿ ತೊಡಗಿಸಿಕೊಂಡ ಪ್ರಧಾನಿಗೆ ಉತ್ತರ ಪ್ರದೇಶದ ಜನರು ಪ್ರತಿಕ್ರಿಯಿಸಿದ ರೀತಿ ನನಗೆ ಹೆಮ್ಮೆ ತಂದಿದೆ. ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಲ್ಲಿ ಮತ್ತು ರಾಯ್ಬರೇಲಿ, ಅಮೇಥಿ ಸೇರಿದಂತೆ ಭಾರತದಾದ್ಯಂತ ಒಗ್ಗಟ್ಟಿನಿಂದ ಹೋರಾಡಿದೆ ಮತ್ತು ಉತ್ತರ ಪ್ರದೇಶದ ಎಲ್ಲಾ ಸಮಾಜವಾದಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಈ ಗೆಲವು ಸಿಕ್ಕಿದೆ ಎಂದು ಶ್ಲಾಘಿಸಿದರು.