ಪ್ರಧಾನಿ ಮೋದಿ ಭೇಟಿಗೂ ಮುನ್ನ ಇಟಲಿಯಲ್ಲಿ ಖಲಿಸ್ತಾನಿ ಸಂಘಟನೆಯ ಅಟ್ಟಹಾಸ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಇಟಲಿಯಲ್ಲಿ ಖಲಿಸ್ತಾನಿ ಸಂಘಟನೆಗಳು ಬಾಲ ಬಿಚ್ಚಿದೆ. ಪ್ರಧಾನಿ ಮೋದಿ ಜಿ2 ಶೃಂಗಸಭೆಗಾಗಿ ಇಟಲಿ ಪ್ರವಾಸಕ್ಕೂ ಕೆಲವೇ ದಿನ ಮುನ್ನ ಖಲಿಸ್ತಾನಿ ಉಗ್ರ ಸಂಘಟನೆಗಳು ಭಾರೀ ಪ್ರತಿಭಟನೆ, ಆಕ್ರೋಶ ಹೊರಹಾಕಿದೆ. ಇಟಲಿಯಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.

ಘಟನೆ ಕುರಿತು ಭಾರತದ ವಿದೇಶಾಂಗ ಇಲಾಖೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸಗೊಳಿಸದ ಪ್ರಕರಣವನ್ನು ಭಾರತ ವಿದೇಶಾಂಗ ಇಲಾಖೆ ಗಭೀರವಾಗಿ ಪರಿಣಮಿಸಿದೆ. ಘಟನೆಯನ್ನು ಖಂಡಿಸಿರುವ ಭಾರತ, ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸಗೊಳಿಸಿರುವ ಘಟನೆ ಉಭಯ ದೇಶಗಳ ನಡುವಿನ ಭಾಂದವ್ಯವನ್ನೇ ಪ್ರಶ್ನೆ ಮಾಡುವಂತಿದೆ. ಈ ಘಟನೆಗೆ ಕಾರಣವ ಆಗಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಹೇಳಿದ್ದಾರೆ.

ಜೂನ್ 14 ರಿಂದ ಇಟಲಿಯಲ್ಲಿ ಜಿ7 ಶೃಂಗಸಭೆ ನಡೆಯಲಿದೆ. 50ನೇ ಜಿ7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಇಟಲಿ ಪ್ರವಾಸ ಮಾಡಲಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೋದಿಗೆ ಇದು ಮೊದಲ ವಿದೇಶ ಪ್ರವಾಸವಾಗಿದೆ. ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಭಾಗಿಯಾಗಲು ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಈ ಆಹ್ವಾನವನ್ನು ಸ್ವೀಕರಿಸಿದ ಮೋದಿ ಅವರು ಇಟಲಿಯ ಅಪುಲಿಯಾದ ಬೊರ್ಗೊ ಎಗ್ನಾಜಿಯಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಜೂ.13 ರಿಂದ ಜೂ. 15ರ ವರೆಗೆ ಇಟಲಿಗೆ ತೆರಳಲಿದ್ದಾರೆ ಆದರೆ ಇದಕ್ಕೂಕೆಲವೇ ದಿನಗಳ ಮೊದಲು ಇಟಲಿಯಲ್ಲಿ ಖಲಿಸ್ತಾನಿ ಉಗ್ರ ಸಂಘಟೆಗಳ ಹಾವಳಿ ಹೆಚ್ಚಾಗಿದೆ.

ಇಟಲಿ ಸ್ಪಷ್ಟನೆ ಏನು?
ಮೋದಿ ಇಟಲಿ ಪ್ರವಾಸದಲ್ಲಿ ಈ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಉಭಯ ದೇಶಗಳ ನಡುವಿನ ಅತ್ಯುತ್ತಮ ಸಂಬಂಧದ ಧ್ಯೋತಕವಾಗಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಆದರೆ ಖಲಿಸ್ತಾನಿ ಸಂಘಟನೆ ಇದೀಗ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಇಟಲಿ ಸ್ಪಷ್ಟಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!