June 28, 2026
Sunday, June 28, 2026
spot_img

ಕರೂರ್ ಕಾಲ್ತುಳಿತ ಪ್ರಕರಣ: ಇಂದು CBI ವಿಚಾರಣೆಗೆ ವಿಜಯ್ ಹಾಜರಿ, ದೆಹಲಿಯಲ್ಲಿ ಭದ್ರತೆಗೆ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಜನವರಿ 12ರಂದು ದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾಗಲಿದ್ದಾರೆ. ಸಿಬಿಐ ನೀಡಿರುವ ಸಮನ್ಸ್‌ಗೆ ಅನುಗುಣವಾಗಿ ಅವರು ವಿಚಾರಣೆಗೆ ಹಾಜರಾಗುತ್ತಿದ್ದು, ಈ ಸಂದರ್ಭ ಭದ್ರತೆ ಒದಗಿಸುವಂತೆ ಪಕ್ಷದ ವತಿಯಿಂದ ರಾಷ್ಟ್ರ ರಾಜಧಾನಿ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಮಾಹಿತಿ ಪ್ರಕಾರ, ವಿಜಯ್ ಅವರು ಸೋಮವಾರ ಬೆಳಿಗ್ಗೆ 7 ಗಂಟೆಗೆ ಚೆನ್ನೈನಿಂದ ಚಾರ್ಟರ್ಡ್ ವಿಮಾನದ ಮೂಲಕ ನವದೆಹಲಿಗೆ ತೆರಳಿ, ಸಿಬಿಐ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆ, ಅವರ ಹಾಜರಾತಿ ಮಹತ್ವ ಪಡೆದುಕೊಂಡಿದೆ.

ನಟ ಹಾಗೂ ರಾಜಕೀಯ ನಾಯಕನಾಗಿ ವಿಜಯ್ ಅವರಿಗೆ ದೊಡ್ಡ ಜನಪ್ರಿಯತೆ ಇರುವುದರಿಂದ, ಸಾರ್ವಜನಿಕ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಯ ದೃಷ್ಟಿಯಿಂದ ಸಮರ್ಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಟಿವಿಕೆ ಪಕ್ಷವು ದೆಹಲಿ ಪೊಲೀಸರಿಗೆ ವಿನಂತಿಸಿದೆ. ವಿಚಾರಣೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವೆಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !