ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನನ್ನು ಈಗಾಗಲೇ ಬಂಧಿಸಲಾಗಿದೆ . ಹೀಗಾಗಿ ಸ್ಯಾಂಡಲ್ ವುಡ್ ನಿಂದ ಬ್ಯಾನ್ ಮಾಡುವಂತೆ ಹಲವಾರು ಸಂಘಟನೆಗಳು ಹಾಗೂ ಸಾರ್ವಜನಿಕರು ಕೂಡ ಆಗ್ರಹಿಸಿದ್ದಾರೆ.
ಹಾಗಾಗಿ ಇದೀಗ ಫಿಲಂ ಚೇಂಬರ್ ಸಭೆ ಕರೆದಿದ್ದು, ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
ಈಗಾಗಲೇ ಕೊಲೆ ಕೇಸಿನಲ್ಲಿ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೇ ಕ್ಷಣಗಳಲ್ಲಿ ಫಿಲಂ ಚೇಂಬರ್ ಸಭೆ ನಡೆಯಲಿದ್ದು, ಅಧ್ಯಕ್ಷ ಎಂ ಎನ್ ಸುರೇಶ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತದೆ. ಸ್ಯಾಂಡಲ್ ವುಡ್ ನಿಂದ ನಟ ದರ್ಶನ್ ನನ್ನು ಬ್ಯಾನ್ ಮಾಡ್ತಾರಾ ಎಂಬ ಕುರಿತು ಕೆಲವೇ ಕ್ಷಣಗಳಲ್ಲಿ ಮಾಹಿತಿ ಹೊರಬೀಳಲಿದೆ.
ದರ್ಶನ್ ಬ್ಯಾನ್ ಬಗ್ಗೆ ಸಮಿತಿಯ ಸದಸ್ಯರು ಚರ್ಚಿಸಲಿದ್ದಾರೆ.50 ಸದಸ್ಯರ ಬದಲು 27 ಮಂದಿ ಅಷ್ಟೇ ಭಾಗಿಯಾಗುವ ಸಾಧ್ಯತೆ ಇದೆ. ಸಭೆಯಲ್ಲಿ ದರ್ಶನ್ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.
ಫಿಲಂ ಚೆಂಬರ್ ಬೈಲಾ ಪ್ರಕಾರ ಯಾವುದೇ ಕಲಾವಿದರನ್ನು ಆಗಲಿ ಸ್ಯಾಂಡಲ್ ವುಡ್ ನಿಂದ ಬ್ಯಾನ್ ಮಾಡಲು ಆಗುವುದಿಲ್ಲ ಎಂದು ಹೇಳಲಾಗಿದ್ದು, ಹಾಗಾಗಿ ನಟ ದರ್ಶನ್ ಅವರ ವಿರುದ್ಧ ಫಿಲಂ ಚೇಂಬರ್ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂಬುದು ಈ ಒಂದು ತುರ್ತು ಸಭೆಯಲ್ಲಿ ಸಮಿತಿಯ ಸದಸ್ಯರು ತೆಗೆದುಕೊಳ್ಳುವ ನಿರ್ಧಾರದ ಮೇಲೆ ನಿಂತಿದೆ.