ಶಬರಿಮಲೆ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆ: ನಿಲುವು ಬದಲಿಸಿದ ಕೇರಳ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಕ್ಷೇಪಗಳ ಹಿನ್ನೆಲೆಯಲ್ಲಿ ತನ್ನ ನಿಲುವು ಬದಲಿಸಿರುವ ಕೇರಳ ಸರ್ಕಾರ ಶಬರಿಮಲೆ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯ ಭೂಸ್ವಾಧೀನ ಅಧಿಸೂಚನೆ ಹಿಂದಕ್ಕೆ ಪಡೆಯುವುದಾಗಿ ಹೈಕೋರ್ಟ್‌ಗೆ ಹೇಳಿದೆ.

ಇದರ ಬೆನ್ನಲ್ಲೇ ಭೂಸ್ವಾಧೀನ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಹೊರಡಿಸುವುದಾಗಿ ಕೂಡಾ ಹೇಳಿದೆ.
ಪ್ರಸ್ತುತ ಅಧಿಸೂಚನೆಗೆ ಈ ಹಿಂದೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿಲುವನ್ನು ಬದಲಿಸಿದ್ದು, ಭೂ ಸ್ವಾಧೀನದಿಂದಾಗುವ ಸಾಮಾಜಿಕ ಪರಿಣಾಮದ ಅಧ್ಯಯನವನ್ನು ಹೊಸ ಏಜೆನ್ಸಿಯಿಂದ ನಡೆಸಲಾಗುವುದು ಎಂದು ಕೋರ್ಟ್‌ಗೆ ಹೇಳಿದೆ.

ಕೇರಳ ಸರ್ಕಾರದ ಭೂ ಸ್ವಾಧೀನ ಅಧಿಸೂಚನೆಗೆ ಬಿಲೀವರ್ಸ್ ಚರ್ಚ್ ಅಧೀನದಲ್ಲಿರುವ ಅಯನಾ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಆಕ್ಷೇಪ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಅಧಿಸೂಚನೆಗೆ ತಡೆ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!