ಹೊಸದಿಗಂತ ಕಲಬುರಗಿ:
ನಗರದ ಶರಣಬಸವೇಶ್ವರ ಕೆರೆಯ ಪಕ್ಕದಲ್ಲಿರುವ ಸಪ್ತಗಿರಿ ಆರೆಂಜ್ ಹೋಟೆಲಿನಲ್ಲಿ ಸಂಭವಿಸಿದ ಸಿಲಿಂಡರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ರೋಜಾ ಬಿ ಬಡಾವಣೆಯ ನಿವಾಸಿ ಮಲ್ಲಿಕಾರ್ಜುನ (40) ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ಬೆಳಗ್ಗೆ ಸಿಲಿಂಡರ್ ಸ್ಫೋಟವಾಗಿ 10ಕ್ಕೂ ಅಧಿಕ ಜನ ಗಾಯಗೊಂಡಿದ್ದರು, ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಐವರನ್ನು ಮಿರಜ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರು ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಮಿರಜ್ ಆಸ್ಪತ್ರೆಗೆ ದಾಖಲಾಗಿದ್ದ ಮಲ್ಲಿಕಾರ್ಜುನ ಎಂಬಾತನು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಬ್ರಹ್ಮಪುರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.