ಸೆಮಿಫೈನಲ್‌ ಮೇಲೆ ಕಣ್ಣು: ಭಾರತ ಎದುರು ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಪಂದ್ಯದಲ್ಲಿಂದು ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ .

ನಿರೀಕ್ಷೆಯಂತೆಯೇ ಬಾಂಗ್ಲಾದೇಶ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಟಸ್ಕಿನ್ ಅಹಮದ್ ತಂಡದಿಂದ ಹೊರಬಿದ್ದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಆಸ್ಟ್ರೇಲಿಯಾ ವಿರುದ್ಧ ಸೂಪರ್‌-8 ಹಂತದ ಮೊದಲ ಪಂದ್ಯದಲ್ಲಿ ಸೋಲನುಭವಿಸಿದ್ದ ಬಾಂಗ್ಲಾ ಮೊದಲ ಗೆಲುವಿನ ಕಾತರದಲ್ಲಿದೆ. ತಂಡ ಭಾರತ ವಿರುದ್ಧವೂ ಸೋತರೆ ಸೆಮಿಫೈನಲ್‌ ರೇಸ್‌ನಿಂದ ಬಹುತೇಕ ಹೊರಗುಳಿಯಲಿದೆ.

ಆರಂಭಿಕ ಪಂದ್ಯದಲ್ಲಿ ಆಫ್ಘನ್ನರನ್ನು ಮಣಿಸಿರುವ ಭಾರತಕ್ಕೆ 2ನೇ ಗುಂಪಿನ ಕೊನೆ ಪಂದ್ಯದಲ್ಲಿ ಆಸ್ಟ್ರೇಲಿಯಾ ಸವಾಲು ಎದುರಾಗಲಿದೆ. ಹೀಗಾಗಿ ಆಸೀಸ್‌ ಸವಾಲಿಗೂ ಮುನ್ನವೇ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಲು ಭಾರತ ಎದುರು ನೋಡುತ್ತಿದೆ.

ಭಾರತ: ರೋಹಿತ್‌ ಶರ್ಮಾ(ನಾಯಕ), ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್, ಶಿವಂ ದುಬೆ, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್‌ ಯಾದವ್, ಅರ್ಶ್‌ದೀಪ್‌ ಸಿಂಗ್.

ಬಾಂಗ್ಲಾದೇಶ: ತಂಜೀದ್‌ ಹಸನ್, ಲಿಟನ್‌ ದಾಸ್, ನಜ್ಮುಲ್‌ ಹೊಸೈನ್(ನಾಯಕ), ಶಕೀಬ್‌ ಅಲ್ ಹಸನ್, ತೌಹೀದ್‌, ಮಹ್ಮೂದುಲ್ಲಾ, ಮಹೆದಿ, ರಿಶಾದ್‌, ಜೇಕರ್ ಅಲಿ , ತಂಜೀಮ್‌, ಮುಸ್ತಾಫಿಜುರ್‌.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!