ಹೊಸದಿಗಂತ ಡಿಜಿಟಲ್ ಡೆಸ್ಕ್:
18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು,ವಿರೋಧ ಪಕ್ಷ I.N.D.I.A ಬಣದ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಸಂಸತ್ತಿನ ಗಾಂಧಿ ಪ್ರತಿಮೆಯ ಮುಂದೆ ಸಂವಿಧಾನದ ಪ್ರತಿಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತ ನಾಯಕರನ್ನು ಪ್ರಜಾಪ್ರಭುತ್ವದ ರಕ್ಷಕರು ಎಂದು ಕರೆದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಇದರ ವಿಡಿಯೊವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಡಿಯೊದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಟಿಎಂಸಿ ನಾಯಕ ಮಹುವಾ ಮೊಯಿತ್ರಾ ಪ್ರತಿಭಟನೆ ನಡೆಸುತ್ತಿರುವುದನ್ನು ಕಾಣಬಹುದು. ನಾಯಕರು ತಮ್ಮ ಕೈಯಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡರಿದ್ದು, ನಮ್ಮ ಸಂವಿಧಾನವು ಚಿರಾಯುವಾಗಲಿ, ಚಿರಾಯುವಾಗಲಿ ಮತ್ತು ಸಂವಿಧಾನವನ್ನು ಉಳಿಸುವವರು ಯಾರು? ನಾವು ಅದನ್ನು ಮಾಡುತ್ತೇವೆ ಎಂದು ಘೋಷಣೆ ಕೂಗಿದ್ದಾರೆ.
We are the guardians of democracy. We are committed to protecting and upholding the Constitution. We are united in our resolve to fight against injustice.
The INDIA alliance enters the 18th Lok Sabha taking Bapu’s blessings and with a fresh resolve to give voice to the people’s… pic.twitter.com/PaQWgkShE2
— K C Venugopal (@kcvenugopalmp) June 24, 2024