ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆಯ ಬಳಿಕ ಮಗನನ್ನು ಕಳೆದುಕೊಂಡು ಅವರ ಕುಟುಂಬ ಸಂಕಷ್ಟದಲ್ಲಿದ್ದು,ಇದೀಗ ಅವರ ಕುಟುಂಬಕ್ಕೆ ಧ್ರುವ ಸರ್ಜಾ ಅಭಿಮಾನಿಗಳು ಧನ ಸಹಾಯ ಮಾಡಿದ್ದಾರೆ.
ರೇಣಾಕಾಸ್ವಾಮಿ ನಿಧನದಿಂದ ಅವರ ಕುಟುಂಬಕ್ಕೆ ಆಘಾತವಾಗಿದೆ. ಅವರ ಕುಟುಂಬದ ಪರ ಧ್ರುವ ಫ್ಯಾನ್ಸ್ ಬೆಂಬಲಕ್ಕೆ ನಿಂತಿದ್ದಾರೆ. ಧ್ರುವ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ & ಟೀಮ್ ಇದೀಗ ರೇಣುಕಾಸ್ವಾಮಿ ಕುಟುಂಬಸ್ಥರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಈ ವೇಳೆ, ನಟ ಧ್ರುವ ಸರ್ಜಾ ಕೂಡ ಕರೆ ಮಾಡಿ ಮಾತನಾಡಿ, ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನಿಮ್ಮೊಂದಿಗೆ ಸದಾ ನಾವು ಇರುತ್ತೇವೆ. ಏನೇ ಇದ್ದರೂ ತಿಳಿಸಿ ಎಂದು ರೇಣುಕಾಸ್ವಾಮಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.