ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
“ಸೋರೆನ್ಗೆ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಪ್ರಾಥಮಿಕವಾಗಿ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ” ಎಂದು ಅವರ ವಕೀಲರಾದ ಅರುಣಾಭ್ ಚೌಧರಿ ಹೇಳಿದ್ದಾರೆ.
ಸದ್ಯ ಹೇಮಂತ್ ಸೊರೆನ್ ರಾಂಚಿಯ ಬಿರ್ಸಾ ಮುಂಡಾ ಜೈಲಿನಲ್ಲಿದ್ದಾರೆ. ಅವರು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷರಾಗಿದ್ದಾರೆ. ಜನವರಿ 31 ರಂದು ಜಾರಿ ನಿರ್ದೇಶನಾಲಯ ಸೋರೆನ್ ಅವರನ್ನು ಬಂಧಿಸಿತ್ತು.