ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಹಿರಿಯ ನಾಗರಿಕರಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರಕಾರ ಸಿಹಿ ಸುದ್ದಿ ನೀಡಿದ್ದು, ‘ಮುಖ್ಯಮಂತ್ರಿ ತೀರ್ಥ ದರ್ಶನ’ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಇದರಿಂದ ತೀರ್ಥಯಾತ್ರೆ ಕೈಗೊಳ್ಳಲು ಎಲ್ಲ ಧರ್ಮಗಳ ಹಿರಿಯ ನಾಗರಿಕರಿಗೆ ಸರ್ಕಾರ ನೆರವು ಒದಗಿಸಲಿದೆ.
ವಿಧಾನಸಭೆಯಲ್ಲಿ ಯೋಜನೆ ಕುರಿತು ಮಾತನಾಡಿದ ಅವರು, ಈ ಯೋಜನೆ ನಿಯಮಗಳನ್ನು ರೂಪಿಸಲಾಗುವುದು. ಯಾತ್ರ ಸ್ಥಳಗಳಿಗೆ ಭೇಟಿ ನೀಡಿ ನೀಡಲು ಸಾಧ್ಯವಾಗದ ವೃದ್ಧರಿಗೆ ಈ ಯೋಜನೆಯಿಂದ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.
ಶಿವಸೇನಾ ಶಾಸಕ ಪ್ರತಾಪ್ ಸರ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಶಿಂಧೆ, ಹಣಕಾಸಿನ ಸಮಸ್ಯೆಯಿಂದ ಹಿರಿಯ ನಾಗರಿಕರು ತೀರ್ಥಯಾತ್ರೆ ಹೋಗುವ ಕನಸನ್ನು ನನಸಾಗಿಸಲು ಸಾಧ್ಯವಾಗುವುದಿಲ್ಲ. ಜೊತೆಗೆ ತೀರ್ಥಯಾತ್ರೆಗೆ ಹೇಗೆ ಹೋಗಬೇಕು ಎಂಬುದರ ಬಗ್ಗೆ ಅವರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ಇಂಥವರಿಗೆ ‘ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ ಅನುಕೂಲವಾಗಲಿದೆ ಎಂದು ಹೇಳಿದರು.
ಆರ್ಥಿಕ ಅಡಚಣೆ, ಒಡನಾಟದ ಕೊರತೆ, ತೀರ್ಥಯಾತ್ರೆಯ ವ್ಯವಸ್ಥೆಗಳ ಬಗ್ಗೆ ಸಾಕಷ್ಟು ಮಾಹಿತಿ ಇಲ್ಲದ ಕಾರಣ ಅನೇಕ ಹಿರಿಯ ನಾಗರಿಕರು ತೀರ್ಥಯಾತ್ರೆಗೆ ಹೋಗುವ ತಮ್ಮ ಕನಸನ್ನು ನನಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಪ್ರತಾಪ್ ಸರನಾಯಕ್ ತಿಳಿಸಿದರು. ಈ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಎಲ್ಲಾ ಧರ್ಮಗಳ ಯಾತ್ರಾ ಸ್ಥಳಗಳನ್ನು ಒಳಗೊಂಡಿರುವ ಯೋಜನೆಯನ್ನು ರಚಿಸಬೇಕೆಂದು ಅವರು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಶಿಂಧೆ, ಯಾವುದೇ ವೈಯಕ್ತಿಕ ಅಥವಾ ಆರ್ಥಿಕ ಅಡೆತಡೆಗಳ ಹೊರತಾಗಿಯೂ ಅವರ ಆಧ್ಯಾತ್ಮಿಕ ಆಕಾಂಕ್ಷೆಗಳನ್ನು ಸಾಧಿಸಲು ಸರ್ಕಾರವು ಎಲ್ಲಾ ಧಾರ್ಮಿಕ ಹಿನ್ನೆಲೆಯ ಹಿರಿಯ ನಾಗರಿಕರಿಗೆ ತೀರ್ಥಯಾತ್ರೆಗೆ ಅನುಕೂಲ ಕಲ್ಪಿಸುತ್ತದೆ ಎಂದು ಭರವಸೆ ನೀಡಿದರು.