ಕುಲ್​ದೀಪ್ ಯಾದವ್ ರನ್ನು ಅಭಿನಂದಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಟಿ2೦ವಿಶ್ವಕಪ್​ ತಂಡದ ಭಾಗವಾಗಿದ್ದ ಸ್ಪಿನ್ನರ್ ಕುಲ್​ದೀಪ್ ಯಾದವ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಭಿನಂದಿಸಿದ್ದಾರೆ. ಜತೆಗೆ ಸ್ಮರಣಿಯನ್ನು ನೀಡಿ ಗೌರವಿಸಿದ್ದಾರೆ.

ಕುಲ್​ದೀಪ್​ ಯಾದವ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ವಿಕೆಟ್​ ಕಿತ್ತು ಮಿಂಚಿದ್ದರು. ಉತ್ತಮ ಎಕಾನಮಿಯಲ್ಲಿ ಬೌಲಿಂಗ್​ ನಡೆಸಿ ಗಮನಸೆಳೆದಿದ್ದರು.

ಗೆಲುವಿನ ಬಳಿಕ ಟ್ರೋಫಿ ಎತ್ತಿ ಹಿಡಿಯುವಾಗ ನಾಯಕ ರೋಹಿತ್ ಶರ್ಮ ವಿಶೇಷ ರೀತಿಯಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದ್ದರು. ಈ ಬಗ್ಗೆ ಪ್ರಧಾನಿ ಮೋದಿ ಪ್ರಶ್ನೆ ಕೇಳಿದಾಗ ಕುಲ್​ದೀಪ್​ನೀಡಿರುವ ಉತ್ತರ ಕೇಳಿ ಮೋದಿ ಸೇರಿ ಟೀಮ್​ ಇಂಡಿಯಾ ಆಟಗರರು ನಗೆಗಡಲಲ್ಲಿ ತೇಲಿದ್ದರು.

ರೋಹಿತ್​ ಬಳಿ ಮೋದಿ ಅವರು ಈ ರೀತಿ ಸಂಭ್ರಮಿಸಲು ಚಾಹಲ್ ಸಲಹೆ ನೀಡಿದರೇ? ಎಂದು ಕೇಳಿದರು. ಈ ವೇಳೆ ನಗುಮುಖದಿಂದಲೇ ರೋಹಿತ್, ‘ಹೌದು ಚಾಹಲ್ ಹಾಗೂ ಕುಲದೀಪ್ ಅವರು ಸಲಹೆ ನೀಡಿದ್ದರು’ ಎಂದು ತಿಳಿಸಿದರು. ಈ ವೇಳೆ ಕುಲದೀಪ್ ಅವರಲ್ಲಿ ನಿಮ್ಮ ನಾಯಕನನ್ನು ನೃತ್ಯ ಮಾಡುವಂತೆ ಹೇಳಲು ಹೇಗೆ ಧೈರ್ಯ ಬಂತು ಎಂದು ಪ್ರಧಾನಿ ಕೇಳಿದರು. ಇದಕ್ಕೆ ಉತ್ತರಿಸಿದ ಕುಲ್​ದೀಪ್​, ನಾನು ಹೇಳಿಕೊಟ್ಟಂತೆ ರೋಹಿತ್ ಅನುಕರಿಸಲಿಲ್ಲ ಎಂದು ಹೇಳಿದರು. ಈ ಮಾತು ಕೇಳಿ ಮೋದಿ ಜೋರಾಗಿ ನಕ್ಕರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!