ಕುಶಾಲನಗರದಲ್ಲಿ ಶಾಲಾ ಮಕ್ಕಳ ಅನ್ನಕ್ಕೆ ಕನ್ನ ಹಾಕಿದ ಖದೀಮರು

ದಿಗಂತ ವರದಿ ಕುಶಾಲನಗರ:

ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಶಾಲೆಯ ಮುಂಭಾಗದ ಎರಡೂ ಕೊಠಡಿಗಳ ಬೀಗವನ್ನು ಮುರಿದ ಕಳ್ಳರು, ವಿದ್ಯಾರ್ಥಿಗಳ ಅಕ್ಷರ ದಾಸೋಹದ ಅಕ್ಕಿ ಮತ್ತು ಹಾಲಿನ ಪೊಟ್ಟಣಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!