ನಾಳೆಯಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಭಾರೀ ಮಳೆಯಿಂದ ಬಂದ್ ಆಗಿದ್ದ ಹಾಸನ ಜಿಲ್ಲೆಯ ಶಿರಾಡಿ ಘಾಟ್ ಸಂಚಾರ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ನಿರ್ಬಂಧಿತ ನಿಯಮಗಳಡಿ ಸಂಚಾರಕ್ಕೆ ಅವಕಾಶ ನೀಡಿ ಹೊಸ ಆದೇಶ ಹೊರಡಿಸಲಾಗಿದೆ.

ಮಂಗಳೂರು, ಬೆಂಗಳೂರು ನಡುವೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧದಿಂದ ಸಮಸ್ಯೆಯಾದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ನಿರ್ಬಂಧಿತ ಸಂಚಾರಕ್ಕೆ ಅವಕಾಶ ನೀಡಿ ಸಕಲೇಶಪುರ ಉಪ ವಿಭಾಗಾಧಿಕಾರಿ ಶೃತಿ ಅವರು ಆದೇಶ ಹೊರಡಿಸಿದ್ದಾರೆ.

ನಿನ್ನೆ ರಾತ್ರಿಯಿಂದ ವಾಹನ ಸಂಚಾರ ನಿರ್ಬಂಧ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆ ನೂರಾರು ವಾಹನಗಳು ನಿಂತಿವೆ. ನಡು ರಸ್ತೆಯಲ್ಲಿ ನಿಂತು ದೊಡ್ಡ ದೊಡ್ಡ ಟ್ರಕ್‌ಗಳ ಚಾಲಕರು ಪರದಾಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನೂರಾರು ವಾಹನಗಳು ನಿಂತಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!