ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಉಚಿತ ಸಹಾಯವಾಣಿ ಆರಂಭಿಸಿದ ಆರೋಗ್ಯ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚುತ್ತಿದ್ದು, ಎಲ್ಲೆಡೆ ನೀರು ನಿಂತುಕೊಂಡು ಅಪಾಯಕಾರಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು 11 ಸಾವಿರಕ್ಕಿಂತ ಹೆಚ್ಚಾಗಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜ್ವರಕ್ಕೆ ಚಿಕಿತ್ಸೆ ಲಭ್ಯವಾಗುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಟೋಲ್ ಫ್ರೀ ಸಂಖ್ಯೆಯನ್ನು ಆರಂಭಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಳೆಗೇರಿ ಪ್ರದೇಶಗಳು ಸೇರಿದಂತೆ ಕೆಲವೆಡೆ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ. ಆದರೆ, ಇನ್ನೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ಆಸ್ಪತ್ರೆ, ಜಯನಗರ ಆಸ್ಪತ್ರೆ,ಕೆಆರ್ ಪುರಂ ಜನರಲ್ ಆಸ್ಪತ್ರೆ ಹಾಗೂ ವಾಣಿವಿಲಾಸ ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಜೊತೆಗೆ, ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಪಡೆಯಲು ಅನುಕೂಲ ಆಗುವಂತೆ ಉಚಿತ ಸಹಾಯವಾಣಿ 1800 425 8330 ಸಂಖ್ಯೆಯನ್ನು ಆರಂಭಿಸಲಾಗಿದೆ.

ಬೆಂಗಳೂರಿನಲ್ಲಿ ಈವರೆಗೆ ಬರೋಬ್ಬರಿ 4,300ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಇನ್ನೂ 165ಕ್ಕೂ ಹೆಚ್ಚಿನ ಜನರು ಜ್ವರದಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಒಬ್ಬರು ಬಲಿಯಾಗಿದ್ದಾರೆ. ಇನ್ನು ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ನಿರಂತರವಾಗಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಸೊಳ್ಳೆಗಳ ಉತ್ಪತ್ತಿಗೂ ಉತ್ತಮ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣ, ಡೆಂಘೀ ಜ್ವರಕ್ಕೆ ಸೂಕ್ತ ಚಿಕಿತ್ಸೆ ನೀಡುವುದು ಹಾಗೂ ಸಾವಿನ ಪ್ರಮಾಣ ತಗ್ಗಿಸುವುದಕ್ಕೆ ಕ್ರಮ ಕೈಗೊಳ್ಳು ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಲಕ್ಷ ಗಳು ಕಂಡುಬಂದಲ್ಲಿ ಹಾಗೂ ಜ್ವರಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಹೋದಲ್ಲಿ ಜನರು ಅಥವಾ ರೋಗಿಗಳು ಆರೋಗ್ಯ ಇಲಾಖೆ ನೀಡಿರುವ ಉಚಿತ ಸಹಾಯವಾಣಿ ಸಂಖ್ಯೆ 1800 425 8330 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಜೊತೆಗೆ, ಸಹಾಯವಾಣಿ ಸಂಖ್ಯೆಯಲ್ಲಿ ತಿಳಿಸಲಾಗುವ ಮಾರ್ಗಸೂಚಿಗಳನ್ನು ಅನುಸರಿಸಿ ಸಂಬಂಧಪಟ್ಟ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಡೆಂಗ್ಯೂ ಜ್ವರಿದಂದ ಜೀವಹಾನಿ ಆಗುವುದನ್ನು ತಪ್ಪಿಸಿಕೊಳ್ಳಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!