ಬಾಂಗ್ಲಾದೇಶದಲ್ಲಿ ಹಿಂಸಾಚಾರ: ಕೋಲ್ಕತ್ತಾ-ಢಾಕಾ ಮೈತ್ರಿ ಎಕ್ಸ್‌ಪ್ರೆಸ್ ಸೇವೆ ನಾಳೆಯವರೆಗೂ ರದ್ದು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾ, ಬಾಂಗ್ಲಾದೇಶದ ರಾಜಧಾನಿ ಢಾಕಾದೊಂದಿಗೆ ಸಂಪರ್ಕಿಸುವ ‘ಮೈತ್ರಿ ಎಕ್ಸ್‌ಪ್ರೆಸ್’ ರೈಲು ಸೇವೆ ಮಂಗಳವಾರದವರೆಗೆ ಸ್ಥಗಿತಗೊಳಿಸಲಾಗಿದೆ.

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ಮಧ್ಯೆ ಪೂರ್ವ ರೈಲ್ವೆ ಇಲಾಖೆ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶನಿವಾರದಿಂದ ಈ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ವಾರಕ್ಕೊಮ್ಮೆ ಕೋಲ್ಕತ್ತಾ-ಖುಲ್ನಾ-ಕೋಲ್ಕತ್ತಾ ಬಂಧನ್ ಎಕ್ಸ್‌ಪ್ರೆಸ್ ರೈಲನ್ನು ಸಹ ಭಾನುವಾರ ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!